ಕರಾವಳಿ

ಆ. 31ರವರೆಗೆ ಆಗುಂಬೆ ಘಾಟ್‌ ನಲ್ಲಿ ಘನ ವಾಹನ ಸಂಚಾರ ನಿಷೇಧ

ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ 11 ನೇ ತಿರುವುವಿನಲ್ಲಿ  ಭೂಕುಸಿತವಾಗಿರುವ ಹಿನ್ನೆಲೆಯಲ್ಲಿ ಭಾರಿ
ವಾಹನಗಳ ಸಂಚಾರವನ್ನು ಆ. 31ರವರೆಗೆ ಸ್ಥಗಿತಗೊಳಿಸಿ ಲಘು ವಾಹನ ಹಾಗೂ ಬಸ್ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ. ಭಾರಿ ವಾಹನಗಳ ಓಡಾಟಕ್ಕೆ ನಿಷೇಧಿಸಿ
ಪರ್ಯಾಯ ಮಾರ್ಗದಲ್ಲಿ ಸಂಚರಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿಯಿಂದ ಅಧಿಸೂಚನೆ ಹೊರಡಿಸಲಾಗಿದೆ. ಭೂಕುಸಿತದಿಂದಾಗಿ ರಸ್ತೆಯ ಬದಿಯಲ್ಲಿ ಬಿದ್ದು ಹೋಗಿದ್ದ ಗಾರ್ಡ್‌ವಾಲ್ ನ ಮರು ನಿರ್ಮಾಣ ಕಾಮಗಾರಿಗೆ ಸದ್ಯ ತಾತ್ಕಾಲಿಕ ದುರಸ್ತಿ ಕಾರ್ಯ ಮುಂದುವರೆದಿದ್ದು, ದುರಸ್ತಿ ಪೂರ್ಣವಾಗಲು ಎರಡು ವಾರಗಳ ಕಾಲಾವಧಿ ಬೇಕಾಗಿದೆ.

ಪ್ರಸ್ತುತ ಆಗುಂಬೆ ಘಾಟಿಯಲ್ಲಿ ಆಗಾಗ್ಗೆ ಮಳೆಯೂ ಸುರಿಯುತ್ತಿರುವುದರಿಂದ ಮತ್ತೆ ಭೂಕುಸಿತ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ಭಾರಿ ವಾಹನಗಳ ಸಂಚಾರವನ್ನು ಆ. 31 ರವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಪ್ರಕಟನೆಯಲ್ಲಿ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!