ತಾಜಾ ಸುದ್ದಿಗಳುರಾಜ್ಯ

ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ: ಪತ್ರಕರ್ತರ ಮೇಲೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಲ್ಲೆ

ಕೋಲಾರ: ಮಾಜಿ ಸ್ಪೀಕರ್, ಮಾಜಿ ಸಚಿವ ಕೆ ಆರ್
ರಮೇಶ್ ಕುಮಾರ್ ಶುಕ್ರವಾರ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ.

ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಈ ಹಲ್ಲೆ ನಡೆದಿದೆ. ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ ನಡೆಯುತ್ತಿದ್ದಾಗ ಆ ದೃಶ್ಯಗಳನ್ನು ಸೆರೆ ಹಿಡಿಯಲು ಪತ್ರಕರ್ತರು ಮುಂದಾದಾಗ ಅವರ ಮೇಲೆ ರಮೇಶ್‌ಕುಮಾರ್ ಹಲ್ಲೆ ನಡೆಸಿದ್ದಾರೆ.

ಗಲಾಟೆಯ ದೃಶ್ಯ ಸೆರೆ ಹಿಡಿಯುತ್ತಿದ್ದ ಇಬ್ಬರು ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬದ ಪೂರ್ವಬಾವಿ ಸಭೆಯಲ್ಲಿ ರಮೇಶ್ ಕುಮಾರ್ ಹಾಗೂ
ಕೆ.ಎಚ್. ಮುನಿಯಪ್ಪ ಬಣದವರು ಕಿತ್ತಾಟ ನಡೆಸಿದ್ದರು. ಕೈ ಕೈ ಮಿಲಾಯಿಸುವ ಹಂತಕ್ಕೂ ಕಾರ್ಯಕರ್ತರು ತಲುಪಿದ್ದರು. ಬ್ಯಾನರ್‌ನಲ್ಲಿ ಮುನಿಯಪ್ಪ ಫೋಟೋ ಇಲ್ಲದ್ದನ್ನು
ಬೆಂಬಲಿಗರು ಪ್ರಶ್ನೆ ಮಾಡಿದ್ದರು. ಬಳಿಕ ಎರಡೂ ಬಣದವರ ನಡುವೆ ಮಾತಿಗೆ ಮಾತು ಬೆಳೆದು, ಕಿತ್ತಾಟ ನಡೆಯುತ್ತಿತ್ತು. ಈ ಗಲಾಟೆಯ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುತ್ತಿದ್ದ ಪತ್ರಕರ್ತರ ಮೇಲೆ ರಮೇಶ್ ಕುಮಾರ್ ಹಲ್ಲೆ ನಡೆಸಿದ್ದಾರೆ

Related Articles

Leave a Reply

Your email address will not be published. Required fields are marked *

Back to top button
error: Content is protected !!