ಕರಾವಳಿತಾಜಾ ಸುದ್ದಿಗಳು
ಉಡುಪಿಯ ಪ್ರಖ್ಯಾತ ವಕೀಲರಾದ ಸಂಕಪ್ಪ.ಎ ಜೆಡಿಎಸ್ ಸೇರ್ಪಡೆ
![](https://i0.wp.com/www.udupinews.com/wp-content/uploads/2022/08/31fe799de797f1d75e685065b40ed112c664f266e6a576d2147dc745f3493e1a.0.jpg?resize=780%2C470&ssl=1)
ಉಡುಪಿ : ಇಲ್ಲಿಯ ಪ್ರಖ್ಯಾತ ವಕೀಲರು, ಬಿಲ್ಲವ
ಮುಖಂಡರು, ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ಅಧ್ಯಕ್ಷರು ಅದ ಸಂಕಪ್ಪ.ಎ ಅವರಿಗೆ ಆಗಸ್ಟ್ 1 ರಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಯವರು ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಜಾತ್ಯತೀತ
ಜನತಾದಳ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಎಸ್. ಎಲ್. ಬೋಜೆ ಗೌಡ, ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ನಾಯಕರಾದ ವಸಂತ ಪೂಜಾರಿ ಮಂಗಳೂರು, ಇಟ್ಬಾಲ್ ಮಂಗಳೂರು, ಇಟ್ಬಾಲ್ ಅತ್ರಾಡಿ, ಭರತ್ ಶೆಟ್ಟಿ, ಸಂಜಯ್, ಚಂದ್ರಹಾಸ್ ಮತ್ತು ರಜಾಕ್ ಉಪಸ್ಥಿತರಿದ್ದರು.