ಕರಾವಳಿತಾಜಾ ಸುದ್ದಿಗಳು

ಪಿಎಫ್‌ಐ ನಾಯಕರ ಮನೆಗಳಿಗೆ ಇಂದು ಬೆಳ್ಳಂಬೆಳಗ್ಗೆ ಮತ್ತೆ ಪೊಲೀಸರ ದಾಳಿ

ಮಂಗಳೂರು: ಇಂದು ಬೆಳ್ಳಂಬೆಳಗ್ಗೆ ಮಂಗಳೂರಿನ ವಿವಿಧೆಡೆ ಇರುವ ನಿಷೇಧಿತ ಪಿಎಫ್‌ಐ ಮತ್ತು ಎಸ್‌ಡಿಪಿಐ ನಾಯಕರ ಮನೆಗೆ ಮತ್ತೆ ಪೊಲೀಸರು ದಾಳಿ ನಡೆಸಿ ಮನೆಗಳಲ್ಲಿ ಶೋಧ ಕಾರ್ಯ ನಡೆಸಿದ್ದು, ದಾಳಿ ವೇಳೆ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್‍ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಿ ಪಣಂಬೂರು, ಉಳ್ಳಾಲ, ಬಜಪೆ ಠಾಣಾ ವ್ಯಾಪ್ತಿಯ 9 ಕಡೆ ದಾಳಿ ನಡೆಸಿದ್ದಾರೆ. ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಮೊಹಮ್ಮದ್ ರಫೀಕ್ ಅಲಿಯಾಸ್ ಶಾರ್ಟ್ ರಫೀಕ್ ಜೋಕಟ್ಟೆ, ಮೊಹಮ್ಮದ್ ಬಿಲಾಲ್ ಕಸಬಾ ಬೆಂಗ್ರೆ, ಉಳ್ಳಾಲ ಠಾಣೆ ಪೊಲೀಸರು ಮೊಹಮ್ಮದ್ ರಫೀಕ್, ಅಬ್ಬಾಸ್ ಕಿನ್ಯಾ ಎಂಬವರನ್ನು ವಶಪಡಿಸಿಕೊಂಡಿದ್ದಾರೆ. ಕಂಕನಾಡಿ ಗ್ರಾಮಾಂತರ ಪೊಲೀಸರು ಅಕ್ಬರ್‍ ಸಿದ್ದಿಕ್ ಎಂಬಾತನನ್ನು ಅಡ್ಯಾರ್‌ನಿಂದ ವಶಕ್ಕೆ ತೆಗೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕ್ಕರ್‍ ಕುಳಾಯಿ ಅವರನ್ನು ಬಂಧಿಸುವ ಸಲುವಾಗಿ ಅವರ ಮನೆ ಮೇಲೆಯೂ ದಾಳಿ ನಡೆದಿದೆ. ಪೊಲೀಸರು ಈ ವೇಳೆ ಐದು ಮಂದಿಯನ್ನು ವಶಕ್ಕೆ ಪಡೆದಿದ್ದು ಬಂಧಿತರ ವಿರುದ್ದ ಯುಎಪಿಎ ಆಕ್ಟ್‌, ಸೆಕ್ಷನ್ 121 ಸೇರಿ ವಿವಿಧ ಐಪಿಸಿ ಸಕ್ಷೆನ್ ಅಡಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker