ಕರಾವಳಿ
ಶ್ರಾವಣಿ ಭಟ್ ಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ
![](https://i0.wp.com/www.udupinews.com/wp-content/uploads/2023/02/WhatsApp-Image-2023-02-03-at-9.48.21-AM.jpeg?resize=304%2C320&ssl=1)
ಕಾರ್ಕಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನೀಡಲಾಗುವ 2022-23ನೇ ಸಾಲಿನ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಶ್ರಾವಣಿ ಭಟ್ ಆಯ್ಕೆಯಾಗಿದ್ದಾರೆ.
ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ 5ರಿಂದ 18 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಜಿಲ್ಲಾ ಪ್ರಶಸ್ತಿಯನ್ನು ಈ ಬಾರಿ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಶ್ರಾವಣಿ ಭಟ್ ಪಡೆದಿದ್ದಾರೆ. ಪ್ರಶಸ್ತಿಯು 10 ಸಾವಿರ ರೂ. ಬಹುಮಾನವನ್ನು ಒಳಗೊಂಡಿದೆ.
ಶ್ರಾವಣಿ ಬೈಲೂರು ಸ್ಮಿತಾ, ಕೃಷ್ಣರಾಜ ಭಟ್ ದಂಪತಿ ಪುತ್ರಿ ಎಂದು ಶಾಲೆಯ ಮುಖ್ಯೋಪಾಧ್ಯಾಯಿನಿ ಇಂದಿರಾ ಬಿ. ತಿಳಿಸಿದ್ದಾರೆ.